ಇ.ಡಿ.ಯ ದುರುಪಯೋಗದ ಬಗ್ಗೆ ಚರ್ಚಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ರಿಂದ ನಿಲುವಳಿ ಸೂಚನೆ

Prasthutha|

ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ದುರುಪಯೋಗದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಠಾಗೋರ್ ಅವರು ಗುರುವಾರ ನಿಲುವಳಿ ಸೂಚನೆಯನ್ನು ನೀಡಿದ್ದಾರೆ.

- Advertisement -

ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನೀಡಿದ ನೋಟಿಸ್ ನಲ್ಲಿ, ವಿರೋಧ ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ವಿಶೇಷವಾಗಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ನಡವಳಿಕೆಯನ್ನು ಕೈಬಿಡುವಂತೆ ಸದನವು ಇ.ಡಿ.ಗೆ ಸಲಹೆ ನೀಡಬೇಕು ಎಂದು ಠಾಕೂರರು ಕೋರಿದ್ದಾರೆ.

Join Whatsapp