Home ಟಾಪ್ ಸುದ್ದಿಗಳು ಇ.ಡಿ.ಯ ದುರುಪಯೋಗದ ಬಗ್ಗೆ ಚರ್ಚಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ರಿಂದ ನಿಲುವಳಿ ಸೂಚನೆ

ಇ.ಡಿ.ಯ ದುರುಪಯೋಗದ ಬಗ್ಗೆ ಚರ್ಚಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ರಿಂದ ನಿಲುವಳಿ ಸೂಚನೆ

ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ದುರುಪಯೋಗದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಠಾಗೋರ್ ಅವರು ಗುರುವಾರ ನಿಲುವಳಿ ಸೂಚನೆಯನ್ನು ನೀಡಿದ್ದಾರೆ.

ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನೀಡಿದ ನೋಟಿಸ್ ನಲ್ಲಿ, ವಿರೋಧ ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ವಿಶೇಷವಾಗಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ನಡವಳಿಕೆಯನ್ನು ಕೈಬಿಡುವಂತೆ ಸದನವು ಇ.ಡಿ.ಗೆ ಸಲಹೆ ನೀಡಬೇಕು ಎಂದು ಠಾಕೂರರು ಕೋರಿದ್ದಾರೆ.

Join Whatsapp
Exit mobile version