Home ಜಾಲತಾಣದಿಂದ ಕಾಂಗ್ರೆಸ್‌ ಕಚೇರಿ ಧ್ವಂಸ| 10 ಮಂದಿ ಬಜರಂಗದಳ ಕಾರ್ಯಕರ್ತರ ಬಂಧನ

ಕಾಂಗ್ರೆಸ್‌ ಕಚೇರಿ ಧ್ವಂಸ| 10 ಮಂದಿ ಬಜರಂಗದಳ ಕಾರ್ಯಕರ್ತರ ಬಂಧನ

ಜಬಲ್ಪುರ್‌: ಕಾಂಗ್ರೆಸ್‌ ಕಚೇರಿ ಧ್ವಂಸಗೊಳಿಸಿದ 10 ಮಂದಿ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಿಡಿಗೇಡಿಗಳು ಮಧ್ಯಪ್ರದೇಶದ ಜಬಲ್ಪುರ ನಗರದ ಬಲ್ದಿಯೋ ಬಾಗ್‌ ಪ್ರದೇಶದಲ್ಲಿರುವ ಕಾಂಗ್ರೆಸ್‌ ಕಚೇರಿಗೆ ನುಗ್ಗಿ, ವಸ್ತುಗಳನ್ನು ಧ್ವಂಸಗೊಳಿಸಿದ್ದರು.

ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿದ್ದ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯನ್ನು ವಿರೋಧಿಸಿ ಜಬಲ್ಪುರದಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಕೆಲ ಕಿಡಿಗೇಡಿಗಳು ಕಾಂಗ್ರೆಸ್‌ ಕಚೇರಿಗೆ ನುಗ್ಗಿ, ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ 25 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದುವರೆಗೂ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version