ಪಶ್ಚಿಮ ಬಂಗಾಳ: ಕಾಂಗ್ರೆಸ್‌ನ ಏಕೈಕ ಶಾಸಕ ಬೇರಾನ್ ಬಿಸ್ವಾಸ್ ಟಿಎಂಸಿಗೆ ಸೇರ್ಪಡೆ

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಕಾಂಗ್ರೆಸ್‌ನ ಏಕೈಕ ಶಾಸಕ ಬೇರಾನ್ ಬಿಸ್ವಾಸ್ ಸೋಮವಾರ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದರು.

- Advertisement -

ಸಾಗರ್ದಿಘಿ ಶಾಸಕ ಬಿಸ್ವಾಸ್ ಅವರು ಟಿಎಂಸಿಗೆ ಸೇರ್ಪಡೆ ಆದ ಕೂಡಲೇ, ರಾಜ್ಯದಲ್ಲಿ ಆಡಳಿತಾರೂಢ ಪಕ್ಷವನ್ನು ವಿರೋಧಿಸಬೇಕೇ ಅಥವಾ ಕೇಂದ್ರದಲ್ಲಿ ಬಿಜೆಪಿಯನ್ನು ವಿರೋಧಿಸಬೇಕೇ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಬೇಕು ಎಂದು ಬ್ಯಾನರ್ಜಿ ಹೇಳಿದ್ದಾರೆ.

ಇಂದು ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ನಡೆಯುತ್ತಿರುವ ಜೋನೋ ಸಂಜೋಗ್ ಯಾತ್ರೆ ವೇಳೆ ಸಾಗರದಿಘಿ ಕಾಂಗ್ರೆಸ್ ಶಾಸಕ ಬೇರೊನ್ ಬಿಸ್ವಾಸ್ ನಮ್ಮ ಪಕ್ಷ ಸೇರಿದರು. ನಾವು ಅವರನ್ನು ತೃಣಮೂಲ ಕಾಂಗ್ರೆಸ್ ಕುಟುಂಬಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಬಿಜೆಪಿಯ ವಿಭಜಕ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ಹೋರಾಡುವ ನಿಮ್ಮ ಸಂಕಲ್ಪವನ್ನು ಬಲಪಡಿಸಲು ನೀವು ಸರಿಯಾದ ವೇದಿಕೆಯನ್ನು ಆರಿಸಿದ್ದೀರಿ. ಒಟ್ಟಾಗಿ, ನಾವು ಗೆಲ್ಲುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ.

Join Whatsapp