ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಹೀನಾಯ ಸೋಲು: ನಾಳೆ ಕಾಂಗ್ರೆಸ್ ನಿಂದ ಆತ್ಮಾವಲೋಕನ ಸಭೆ ?

Prasthutha|

ನವದೆಹಲಿ: ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅನುಭವಿಸಿದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

- Advertisement -

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಬೆಳಿಗ್ಗೆ 10.30 ಕ್ಕೆ ಸರಿಯಾಗಿ ನಡೆಯುವ ಸಭೆಯಲ್ಲಿ, ಪಕ್ಷದ ಸಂಸದೀಯ ಕಾರ್ಯತಂತ್ರದ ಕುರಿತಾದ ಸಭೆಯಲ್ಲಿ ಚರ್ಚೆಯಾಗಲಿದೆ.

ಪ್ರಸಕ್ತ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿನ ಕುರಿತು ಆತ್ಮಾವಲೋಕನ ನಡೆಯುವ ಸಾಧ್ಯತೆಯಿದ್ದು, ಪಕ್ಷದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Join Whatsapp