Home ಟಾಪ್ ಸುದ್ದಿಗಳು ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

ಬೆಂಗಳೂರು: ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ.

ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು.

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಹೇಳಿದರು

Join Whatsapp
Exit mobile version