ಗೋಮಾಂಸ ಇದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Prasthutha|

ಬೆಂಗಳೂರು: ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಾಗ ಅದರಿಂದ ಚೆಲ್ಲಾಪಿಲ್ಲಿಯಾಗಿ ಬಿದ್ದ ಗೋಮಾಂಸ ಕಂಡ ಸ್ಥಳೀಯರು ಬೈಕ್​ಗೆ ಬೆಂಕಿ ಹಚ್ಚಿ ಸವಾರನಿಗೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

- Advertisement -

ಹಿಂದೂಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬೈಕ್​ ನಲ್ಲಿ ಸಾಗಿಸುತ್ತಿದ್ದ ಗೋಮಾಂಸ ಸಹ ರಸ್ತೆಯಲ್ಲಿ ಚೆಲ್ಲಿದೆ. ಇದನ್ನು ಕಂಡ ದುಷ್ಕರ್ಮಿಗಳ ತಂಡ ಬೈಕ್ ​ಗೆ ಬೆಂಕಿ ಹಚ್ಚಿದೆ. ಪರಿಣಾಮ ಬೆಂಕಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ನಂತರ ಬೈಕ್​ ಸವಾರನನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

Join Whatsapp