Home ಟಾಪ್ ಸುದ್ದಿಗಳು ನಟಿ ರಮ್ಯಾ’ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

ನಟಿ ರಮ್ಯಾ’ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

ಬೆಂಗಳೂರು: ನಟಿ ರಮ್ಯಾ ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.


ಈ ಬಗ್ಗೆ ಎಐಸಿಸಿ ಸಭೆಯಲ್ಲಿ ಚರ್ಚೆ ನಡೆದಿದ್ದು ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದ ವಿಚಾರ ಮೂಲಗಳಿಂದ ತಿಳಿದುಬಂದಿದೆ.
ಪದ್ಮನಾಭನಗರ ಮೊದಲ ಆದ್ಯತೆಯಾಗಿದ್ದರೆ, ಮಂಡ್ಯ ಎರಡನೇ ಆದ್ಯತೆಯಾಗಿದೆ. ಚನ್ನಪಟ್ಟಣ ಮೂರನೇ ಆದ್ಯತೆಯಾಗಿದೆ. ಒಂದು ವೇಳೆ ಚನ್ನಪಟ್ಟಣದಲ್ಲಿ ಕಣಕ್ಕೆ ಇಳಿದರೆ ಕುಮಾರಸ್ವಾಮಿ ನೇರ ಎದುರಾಳಿಯಾಗಲಿದ್ದಾರೆ.


ಚುನಾವಣಾ ಸಮಿತಿ ಸಭೆಯಲ್ಲಿ ರಮ್ಯಾ ರಾಜ್ಯ ರಾಜಕಾರಣಕ್ಕೆ ವಾಪಸ್ ಬರಲು ಸಕಾಲ ಎಂದು ಕೆಲ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version