ಕಾಂಗ್ರೆಸ್ ರಾಜಕಾರಣ ಬಿಜೆಪಿಗೆ ಲಾಭ: ಅಂಬೇಡ್ಕರ್ ಮೊಮ್ಮಗ

Prasthutha|

ಧಾರವಾಡ: ಕಾಂಗ್ರೆಸ್ ರಾಜಕಾರಣದ ಬಗ್ಗೆ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸಹಾಯ ಮಾಡುವ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
ವಿಚಾರ ಮಾಡುವ ರಾಜಕಾರಣ ಕಾಂಗ್ರೆಸ್ ನಲ್ಲಿ ಇಲ್ಲವೇ ಇಲ್ಲ. ಕಾಂಗ್ರೆಸ್ ದಾರಿ ತಪ್ಪಿಸುವ ರಾಜಕೀಯ ಮಾಡುತ್ತಿದೆ. ಇದರ ಜೊತೆಗೆ ಬಿಜೆಪಿಗೆ ಸಹಾಯ ಮಾಡುವ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಧೈರ್ಯ ಬೆಳೆಯುತ್ತಿದೆ, ಅದರಿಂದ ಸಂವಿಧಾನ ಬದಲಾವಣೆ ಬಗ್ಗೆ ಅವರು ಮಾತನಾಡುತಿದ್ದಾರೆ ಎಂದು ಕಿಡಿ ಕಾರಿದರು.


1950ರಲ್ಲಿ ಆರ್ ಎಸ್ ಎಸ್ ಈ ಸಂವಿಧಾನ ನಮ್ಮದಲ್ಲ. ನಮಗೆ ಯಾವಾಗ ಅವಕಾಶ ಸಿಗುತ್ತೋ, ಆ ದಿನ ಸಂವಿಧಾನವನ್ನು ನಾವು ಬದಲಾವಣೆ ಮಾಡುತ್ತೇವೆ ಎಂದಿತ್ತು. ಅವರ ಉದ್ದೇಶನೇ ಸಂವಿಧಾನ ಬದಲಿಸಬೇಕು ಎಂಬುದಾಗಿದೆ. ತಮ್ಮ ಅಧಿಕಾರಕ್ಕಾಗಿ ಈ ರೀತಿ ಮಾಡುತ್ತಿದೆ. ಸಂವಿಧಾನ ಬದಲಾವಣೆಯೇ ಆರ್ ಎಸ್ ಎಸ್, ಬಿಜೆಪಿಯ ಅಜೆಂಡಾ ಎಂದರು.

Join Whatsapp