Home ಜಾಲತಾಣದಿಂದ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಎಂ.ಆರ್. ಸೀತಾರಾಂ: ಪಕ್ಷ ಸಂಘಟನೆ ಕುರಿತು...

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಎಂ.ಆರ್. ಸೀತಾರಾಂ: ಪಕ್ಷ ಸಂಘಟನೆ ಕುರಿತು ಚರ್ಚೆ

ಬೆಂಗಳೂರು; ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಅವರು ದೆಹಲಿಯಲ್ಲಿಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭ ಕೋರಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು.

ವಿಶೇಷವಾಗಿ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ಪಕ್ಷ ಸಂಘಟನೆ ಕುರಿತು ಎಂ.ಆರ್. ಸೀತಾರಾಂ ಸುದೀರ್ಘ ಸಮಾಲೋಚನೆ ನಡೆಸಿದರು.

Join Whatsapp
Exit mobile version