Home ಟಾಪ್ ಸುದ್ದಿಗಳು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಮುಖಂಡನ ಮಾಲಿಕತ್ವದ ಬಸ್’ಗೆ ಕಲ್ಲು ತೂರಾಟ!

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಮುಖಂಡನ ಮಾಲಿಕತ್ವದ ಬಸ್’ಗೆ ಕಲ್ಲು ತೂರಾಟ!

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದ್ದು, ನಗರದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿರುವ ಘಟನೆ ನಡೆದಿದೆ.


ಜೋಕಟ್ಟೆಯಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ ಬಸ್ ಗೆ ಕಲ್ಲು ತೂರಾಟ ನಡೆದಿದೆ.


ಜೋಕಟ್ಟೆಯಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ 2ಸಿ ನಂಬರ್ ನ ಬಸ್ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಜೋಕಟ್ಟೆಯ ನೌಫಾಲ್ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು. ಈತ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಬಸ್ಸು ಚಾಲಕ, ನಿರ್ವಾಹಕ ನ ಆಕ್ರೋಶ

ಖಾಸಗಿ ಬಸ್ಸಿನ ಗಾಜು ಒಡೆದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಸ್ಸು ಚಾಲಕ, ನಿರ್ವಾಹಕರು ಈ ರೀತಿ ಬಸ್ಸಿನ ಗಾಜು ಒಡೆದ ಸಂದರ್ಭ ಪ್ರಯಾಣಿಕರಿಗೆ ತೊಂದರೆ ಆದರೆ ಹೊಣೆ ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp
Exit mobile version