ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ: ಕಾಂಗ್ರೆಸ್‌’ನಿಂದ ಪ್ರತಿಭಟನೆ

Prasthutha|

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಮನೆಗೆ ಕಲ್ಲು ತೂರಾಟ ಕೃತ್ಯವನ್ನು ಖಂಡಿಸಿ ಹಾಗೂ ಕಲ್ಲು ಎಸೆದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -


ನಗರದ ವೇಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಬಳಿಯಿಂದ ಧಿಕ್ಕಾರ ಕೂಗಿಕೊಂಡು ಹೊರಟ ಮುಖಂಡರು ಮತ್ತು ಕಾರ್ಯಕರ್ತರು ಕಂಕನಾಡಿ ವೃತ್ತದಲ್ಲಿ ಸಭೆ ನಡೆಸಿದರು.


ಬಿಜೆಪಿ ಕಚೇರಿ ವರೆಗೆ ಮೆರವಣಿಗೆ ಮಾಡುವುದಾಗಿ ಮೊದಲು ಹೇಳಿದ್ದರೂ ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ ಮೆರವಣಿಗೆಯನ್ನು ಕಂಕನಾಡಿಯಲ್ಲಿಮುಕ್ತಾಯಗೊಳಿಸಲಾಯಿತು.



Join Whatsapp