Home ಟಾಪ್ ಸುದ್ದಿಗಳು ಸಿಎಎ ಜಾರಿ ಮಾಡಿದ ಸಂದರ್ಭವನ್ನು ಪ್ರಶ್ನಿಸಿದ ಕಾಂಗ್ರೆಸ್​

ಸಿಎಎ ಜಾರಿ ಮಾಡಿದ ಸಂದರ್ಭವನ್ನು ಪ್ರಶ್ನಿಸಿದ ಕಾಂಗ್ರೆಸ್​

ನವದೆಹಲಿ: ದೇಶವು ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವಾಗಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡಿದ್ದನ್ನು ಕಾಂಗ್ರೆಸ್ ಪ್ರಶ್ನಿಸಿದೆ.ಕಾಂಗ್ರೆಸ್​ ವಕ್ತಾರ ಜೈರಾಮ್​ ರಮೇಶ್​ ತಮ್ಮ ಎಕ್ಸ್​ ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

2019ರ ಡಿಸೆಂಬರ್​ನಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಪ್ರಕಟಿಸಲು ಮೋದಿ ಸರ್ಕಾರ ನಾಲ್ಕು ವರ್ಷ ಮತ್ತು ಮೂರು ತಿಂಗಳುಗಳನ್ನು ತೆಗೆದುಕೊಂಡಿದೆ. ತಮ್ಮ ಸರ್ಕಾರವು ಉದ್ಯಮ ರೀತಿಯಲ್ಲಿ ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಸದಾ ಹೇಳಿಕೊಳ್ಳುತ್ತಾರೆ. ಆದರೆ, ಸಿಎಎ ಅಧಿಸೂಚನೆ ಪ್ರಕಟಿಸಲು ತೆಗೆದುಕೊಂಡ ಸಮಯ ಪ್ರಧಾನಿ ಮೋದಿ ಅವರ ಮತ್ತೊಂದು ಹಸಿ ಸುಳ್ಳನ್ನು ಪ್ರದರ್ಶಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಸಿಎಎ ಅಧಿಸೂಚನೆ ಪ್ರಕಟಿಸಲು ಸುಮಾರು 9 ಬಾರಿ ಕಾಲಾವಕಾಶ ತೆಗೆದುಕೊಂಡ ಬಳಿಕ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಜಾರಿ ಮಾಡಿರುವುದು ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಲೋಕಸಭಾ ಚುನಾವಣಾ ಧ್ರುವೀಕರಣಕ್ಕಾಗಿ ಸ್ಪಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಚುನಾವಣಾ ಬಾಂಡ್‌ಗಳ ಹಗರಣದ ಕುರಿತು ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಕ್ರಮದ ನಂತರ ತಮ್ಮ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನದಂತೆ ಇದು ಕಂಡುಬರುತ್ತಿದೆ ಎಂದು ಜೈರಾಮ್​ ರಮೇಶ್​ ಟೀಕಿಸಿದ್ದಾರೆ.

Join Whatsapp
Exit mobile version