ಕಾಂಗ್ರೆಸ್​ ಸೋಲಿಸಲು ಬಿಆರ್‌ ಎಸ್​, ಬಿಜೆಪಿ, ಎಐಎಂಐಎಂ ಒಟ್ಟಾಗಿ ಕುತಂತ್ರ ನಡೆಸಿವೆ: ರಾಹುಲ್​ ಗಾಂಧಿ

Prasthutha|

- Advertisement -

ಹೈದರಾಬಾದ್​​: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಆರ್‌ ಎಸ್​, ಬಿಜೆಪಿ ಮತ್ತು ಎಐಎಂಐಎಂ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಕಾಂಗ್ರೆಸ್​ ಪಕ್ಷವನ್ನು ಸೋಲಿಸಲು ಕುತಂತ್ರ ನಡೆಸಿವೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದರು.

ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ತೆಲಂಗಾಣಕ್ಕೆ ಕಾಂಗ್ರೆಸ್​ ಏನು ಮಾಡಿದೆ ಎಂದು ಸಿಎಂ ಕೆಸಿಆರ್​ ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏನು ಮಾಡಿದೆ ಎಂದು ಹೇಳಬೇಕಿರುವುದು ಕಾಂಗ್ರೆಸ್​​ ಅಲ್ಲ. ತೆಲಂಗಾಣಕ್ಕೆ ಬಿಆರ್​ಎಸ್ ಏನು ಮಾಡಿದೆ ಹೇಳಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ತಾವು ಏನು ಮಾಡುತ್ತೇವೆ ಎಂಬುದನ್ನೂ ಜನತೆಗೆ ವಿವರಿಸಿದರು.

Join Whatsapp