‘ಖರ್ಗೆ ವಿಷಕಾರಿ’ ಎಂಬ ನಳೀನ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

Prasthutha|

- Advertisement -

ಬೆಂಗಳೂರು: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ವಿಷಕಾರಿ’ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಹೇಳಿಕೆ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ‘ಖರ್ಗೆ ಕುರಿತು ಮಾತನಾಡುವ ಮೊದಲು ಅವರ ಸಾಧನೆಗಳನ್ನು ಅರಿಯಿರಿ’ ಎಂದು ತಿರುಗೇಟು ನೀಡಿದ್ದಾರೆ.

‘ಒಂಬತ್ತು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ಆಯ್ಕೆಯಾದ ಖರ್ಗೆ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಎರಡೂ ಕಡೆಗಳಲ್ಲಿ ಸಚಿವರಾಗಿ ಕೆಲಸ ಮಾಡಿರುವ ಅವರು, ರಾಷ್ಟ್ರ, ರಾಜ್ಯ ಮತ್ತು ಕಲ್ಯಾಣ ಕರ್ನಾಟಕಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಖರ್ಗೆ ವಿಷಕಾರಿ ಆದರೆ, ಬಿಜೆಪಿಯವರೇನು ಮಕರಂದ ಸೂಸುವವರೇ’ ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ಪ್ರಶ್ನಿಸಿದೆ.

- Advertisement -

ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರೆಲ್ಲರೂ ಸೇರಿಕೊಂಡು ಕಳೆದ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರನ್ನು ಸೋಲಿಸಿರಬಹುದು. ಆದರೆ, ಇದರಿಂದ ಕಲಬುರ್ಗಿ ಜಿಲ್ಲೆಗೆ ಹೆಚ್ಚಿನ ನಷ್ಟವಾಗಿದೆ. ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಜಿಲ್ಲೆಗೆ ಒಂದು ಸಚಿವ ಸ್ಥಾನವೂ ದೊರಕಿಲ್ಲ ಎಂದು ಟೀಕಿಸಿದ್ದಾರೆ.

Join Whatsapp