ಮತಕ್ಕಾಗಿ ದೇಶದ ಭದ್ರತೆ ಅಡ ಇಡುತ್ತಿರುವ ಕಾಂಗ್ರೆಸ್: ಬೊಮ್ಮಾಯಿ

Prasthutha|

ಹುಬ್ಬಳ್ಳಿ: ಕೇವಲ ಮತಕ್ಕಾಗಿ ದೇಶದ ಭದ್ರತೆಯನ್ನು ಅಡ ಇಡುವಂತಹ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಅವರು ಮತ ಬ್ಯಾಂಕ್ ಓಲೈಕೆ ರಾಜಕಾರಣದ ಮುಸುಕು ಹಾಕಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಬೇರೆ ಏನೂ ಕಾಣಿಸುತ್ತಿಲ್ಲ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

- Advertisement -

ವಿಧಾನಸೌಧದ ಕಾರಿಡಾರ್ ನಲ್ಲಿ ವ್ಯಕ್ತಿಯೊಬ್ಬ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿಗಳಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದ್ದು, ಅವರಿಗೆ ಧೈರ್ಯ ಬಂದಿದೆ ಎಂದು ಹೇಳಿದರು.
ವಿಧಾನಸೌಧಕ್ಕೆ ಬಂದು ದೇಶದ್ರೋಹದ ಘೋಷಣೆ ಕೂಗಲು ಈ ಸರ್ಕಾರ ನೀಡಿರುವ ಪ್ರೋತ್ಸಾಹ ಕಾರಣ. ನಮ್ಮ ಸರ್ಕಾರ ಇದ್ದಾಗ ಇಂತಹ ಶಕ್ತಿಗಳನ್ನು ಸದೆಬಡಿದಿದ್ದೆವು ಎಂದರು.



Join Whatsapp
Exit mobile version