ಮಂಗಳೂರಿನಲ್ಲಿ ಪಕೋಡಾ ಮಾರಿ ಪ್ರತಿಭಟಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

Prasthutha|

ಮಂಗಳೂರು: ಮಂಗಳೂರಿನ ಗಡಿಯಾರ ಗೋಪುರ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಘಟಕದವರು ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ನಿರುದ್ಯೋಗ ದಿನವಾಗಿ ಆಚರಿಸಿದರು. ಇದೇ ವೇಳೆ ಪಕೋಡಾ ತಯಾರಿಸಿ ಮಾರಾಟ ಮಾಡಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -


ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಸೃಷ್ಟಿಯಾಗಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಧಿಕ್ಕಾರ ಕೂಗಿ ಅಣುಕು ಪಕೋಡಾ ಮಾರಾಟ ನಡೆಸಿದರು.


ದ. ಕ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ನಾಯಕರಾದ ಐವಾನ್ ಡಿಸೋಜಾ, ಶಾಹುಲ್ ಹಮೀದ್, ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Join Whatsapp