Home ಟಾಪ್ ಸುದ್ದಿಗಳು ‘ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕ ಚೆನ್ನಾಗಿ ಹಾಕುವ ನೀವು ಕೊರೋನಾ ಸಾವಿನ ಲೆಕ್ಕದಲ್ಲಿ...

‘ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕ ಚೆನ್ನಾಗಿ ಹಾಕುವ ನೀವು ಕೊರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ?’ : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕೊರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ, ಸ್ಮಶಾನಗಳಲ್ಲಿ ಶವಗಳ ಸಾಲು, ಮಾಧ್ಯಮಗಳಲ್ಲಿ ಸಾವಿರ ಸಾವಿನ ಸುದ್ದಿಗಳು, ಆದರೆ ಸರ್ಕಾರ ವೈಫಲ್ಯ ಮುಚ್ಚಲು ಸಾವಿನ ಲೆಕ್ಕ ಮುಚ್ಚಿಡುತ್ತಿದೆ. ಮೋದಿಯ ಚಾಳಿ ಮುಂದುವರೆಸಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಕಾಂಗ್ರೆಸ್, ‘ಜನರ ಜೀವನಕ್ಕೆ ಮಣ್ಣು, ಜೀವಕ್ಕೆ ಬೆಂಕಿ’ ಇದೇ ಈ ಸರ್ಕಾರದ ಸಾಧನೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಹಸಿವು ಕೊಲ್ಲುತ್ತಿದೆ ಕೂಡಲೇ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸಿ, ಇಲ್ಲದೆ ಹೋದಲ್ಲಿ ಸೋಂಕಿತರ ಸಾವುಗಳೊಂದಿಗೆ ಹಸಿದವರ ಸಾವೂ ಸೇರಲಿದೆ, ನಿಮ್ಮ ಮಸಣಗಳು ಸಾಲುವುದಿಲ್ಲ. ಈ ಮನಕಲುಕುವ ಘಟನೆ ಕಂಡೂ ಸುಮ್ಮನಿದ್ದರೆ ಕ್ಷಮೆ ಇರುವುದಿಲ್ಲ ಎಂದು ಹೇಳಿದೆ.

‘ ಸಚಿವ ಆರ್ ಅಶೋಕ್ ಅವರೇ, 20% ಸೋಂಕಿತರು ತಲೆ ಮರೆಸಿಕೊಂಡಿದ್ದಾರೆಂದರೆ ಅದು ಟ್ರೇಸ್, ಟ್ರ್ಯಾಕ್,ಟ್ರೀಟ್‌ನಲ್ಲಿ ವಿಫಲಗೊಂಡ ನಿಮ್ಮ ಸರ್ಕಾರದ ಅಯೋಗ್ಯತನಕ್ಕೆ ಕನ್ನಡಿ. ಜನತೆ ನಿಮ್ಮ ಸರ್ಕಾರದ ಮೇಲೆ, ನಿಮ್ಮ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದಕ್ಕೆ ಸಾಕ್ಷಿ. ಸರ್ಕಾರದ ಕೈಗೆ ಸಿಕ್ಕರೆ ಸಾವೇ ಗತಿ ಎಂದು ಜನತೆ ಅರ್ಥೈಸಿಕೊಂಡಂತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

Join Whatsapp
Exit mobile version