ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಪರವಾಗಿ ನಿಂತಿದೆ: ಡಿ.ಕೆ. ಶಿವಕುಮಾರ್

Prasthutha|

ಮೈಸೂರು: “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement -

ಮೈಸೂರಿನಲ್ಲಿ ನಾಳೆ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಆರೋಪ, ಕುತಂತ್ರಗಳನ್ನು ನೀವು ತಡೆದುಕೊಳ್ಳುತ್ತೀರಿ, ಸಿದ್ದರಾಮಯ್ಯ ಅವರು ಅರಗಿಸಿಕೊಳ್ಳಲು ಕಷ್ಟ ಅಲ್ಲವೇ ಎಂದು ಕೇಳಿದಾಗ, “ಸಿದ್ದರಾಮಯ್ಯ ಭಾವುಕ ವ್ಯಕ್ತಿ. ಅವರ ಆರೋಪ ನಿಜವಾಗಿದ್ದರೆ ಅರಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಆದರೆ ಸುಳ್ಳು ಆರೋಪ ಅವರಿಗೆ ಮಾನಸಿಕ ಹಿಂಸೆಯಾಗಿದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ. ಇದಕ್ಕಾಗಿ ಇಡೀ ಪಕ್ಷ ಹಾಗೂ ಸರ್ಕಾರ ಒಂದಾಗಿ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದ್ದೇವೆ” ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ರಕ್ಷಣೆಗೆ ನೀವೇ ಬಂಡೆಯಾಗಿ ನಿಂತಿದ್ದೀರಿ ಎಂದು ಕೇಳಿದಾಗ, ” ಬಂಡೆಯೋ,ತೋಳೊ. ನಾನಂತೂ ಅವರ ಪರವಾಗಿ ಇದ್ದೇನೆ, ಮುಂದೆಯೂ ಇರುತ್ತೇನೆ” ಎಂದು ತಿಳಿಸಿದರು.



Join Whatsapp