ಭಾರತದ ರಾಜಕೀಯದಲ್ಲಿ ಕಾಂಗ್ರೆಸ್ ಅತ್ಯಂತ ಭ್ರಷ್ಟ ಕುಟುಂಬ: ಬಿಜೆಪಿ ವಾಗ್ದಾಳಿ

Prasthutha|

ನವದೆಹಲಿ: ತಮ್ಮ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ರದ್ದುಗೊಳಿಸುವಂತೆ ರಾಬರ್ಟ್ ವಾದ್ರಾ ಸಲ್ಲಿಸಿದ್ದ ಮನವಿಯನ್ನು ರಾಜಸ್ಥಾನ ಹೈಕೋರ್ಟ್ ತಿರಸ್ಕರಿಸಿದ್ದನ್ನು ಉಲ್ಲೇಖಿಸಿ ಗಾಂಧಿ ಕುಟುಂಬವನ್ನು “ಭಾರತದ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ” ಎಂದು ಬಿಜೆಪಿ ಕರೆದಿದೆ.

- Advertisement -

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಗೌರವ್ ಭಾಟಿಯಾ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಮತ್ತು ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ರಾಹುಲ್ ಗಾಂಧಿ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಮದುವೆಯಾಗಿರುವ ವಾದ್ರಾ ವಿರುದ್ಧದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳ ಬಗ್ಗೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಮೌನ ಮುರಿಯಬೇಕು ಎಂದು ಹೇಳಿದ್ದಾರೆ.

2008-13 ರ ನಡುವೆ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ರೈತರಿಂದ 125 ಬಿಘಾ ಭೂಮಿಯನ್ನು ಕಸಿದುಕೊಂಡಿದೆ. ರೈತರಿಂದ ಭೂಮಿಯನ್ನು ಕಬಳಿಸಲು ಗಾಂಧಿ ಕುಟುಂಬವು ರಾಬರ್ಟ್ ವಾದ್ರಾ ಅವರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಾದ್ರಾ ವಿರುದ್ಧದ ಭ್ರಷ್ಟಾಚಾರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದಿದೆ.

Join Whatsapp