Home ಟಾಪ್ ಸುದ್ದಿಗಳು ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು: ಇಂದು ಸಿದ್ದರಾಮಯ್ಯ ದೆಹಲಿಗೆ

ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು: ಇಂದು ಸಿದ್ದರಾಮಯ್ಯ ದೆಹಲಿಗೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದಲ್ಲಿ 95 ಅಭ್ಯರ್ಥಿಗಳನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸಿಎಂ ಕೋಲಾರ ಅಭ್ಯರ್ಥಿ ಆಯ್ಕೆ ಬಗ್ಗೆ ಸಭೆ ನಡೆಸಿದ್ದಾರೆ.

Join Whatsapp
Exit mobile version