Home ಟಾಪ್ ಸುದ್ದಿಗಳು ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ನಡುಕ: ಸಿದ್ದರಾಮಯ್ಯ ವ್ಯಂಗ್ಯ

ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ನಡುಕ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು:  ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಮತ್ತು ನಡುಕ ಶುರುವಾಗಿದೆ. ಅದೇ ಕಾರಣಕ್ಕೆ ಪಾದಯಾತ್ರೆ ತಡೆಯಲು ಏನೇನೋ ಕಸರತ್ತು ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ‘ಜೆಡಿಎಸ್ನವರು ಮೊದಲಿನಿಂದಲೂ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡೇ ಬಂದಿದ್ದಾರೆ. ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಎದುರಿಸಿದ್ದಾರೆ. ಮುಂದೆ ನಮ್ಮದೇ ಪಕ್ಷ ನಿರ್ಣಾಯಕ ಸ್ಥಾನದಲ್ಲಿ ಇರಲಿದೆ’ ಎಂದು ಹೇಳಿದರು.

Join Whatsapp
Exit mobile version