ಬಿಜೆಪಿಯಲ್ಲಿ ಸದ್ದು ಮಾಡುತ್ತಿರುವುದು ಒಂದು ಲಂಚ ಮತ್ತೊಂದು ಮಂಚ । ಕಾಂಗ್ರೆಸ್ ಕಟು ಟ್ವೀಟ್
Prasthutha: March 13, 2021

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಟ್ವೀಟ್ ಸಮರ ತಾರಕಕ್ಕೇರಿದೆ. ಸಾಮಾಜಿಕ ತಾಣಗಳಲ್ಲಿ ಕೆಸರೆರಚಾಟ ತುಂಬಾ ಜೋರಾಗಿಯೇ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ಪ್ರಕರಣ ದಿನಕ್ಕೊಂದರಂತೆ ಹೊಸ ತಿರುವು ಪಡೆಯುತ್ತಿದೆ. ಇದು ಬಿಜೆಪಿಗೆ ತೀವ್ರ ಮುಜುಗರವನ್ನು ಉಂಟುಮಾಡಿದ್ದು, ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುತ್ತಿರುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ ಎಂದು ಕಾಂಗ್ರೆಸ್ ಟ್ವೀಟ್ ,ಮೂಲಕ ಕಾಟುವಾಗಿ ಟೀಕಿಸಿದೆ.
ಈ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಬಿಜೆಪಿ ಪಕ್ಷವನ್ನು ಮತ್ತು ಮುಖ್ಯಮಂತ್ರಿಗಳನ್ನು ಕಾಲೆಳುಯುತ್ತಿದ್ದು ಜಾರಕಿಹೊಳಿ ಪ್ರಕರಣದ ಬಗ್ಗೆ ಟ್ವೀಟ್ ನಲ್ಲಿ ಹೊಸ ಲೇವಡಿ ಮಾಡಿದೆ. “ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ ಎಂದಿದೆ. ಸಿಡಿ ನಿಜಕ್ಕೂ ನಕಲಿಯೇ ಆಗಿದ್ದರೆ ರಮೇಶ್ ಜಾರಕಿಹೊಳಿಯವರು ದೂರು ನೀಡಲು ಮೀನಾಮೇಷ ಎಣಿಸುತ್ತಿರುವುದೇಕೆ ? ಖಾಸಗಿ ಏಜೆನ್ಸಿಗಳ ಮೊರೆ ಹೋಗುವುದೇತಕೆ ? ಸರ್ಕಾರಿ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲವೇ ಅಥವಾ ಬಿಜೆಪಿಗರ ನಡುವಿನ ಒಳಜಗಳದ ತಿಕ್ಕಾಟದಲ್ಲಿ ತಾವೇ ಬಲಿಯಾಗುವ ಭಯವೇ” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ
