ಕಾಂಗ್ರೆಸ್ ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್ ನಾಯಕ

Prasthutha|

ಮುಂಬೈ: ಕಾಂಗ್ರೆಸ್ ಗೆ ನಮ್ಮ ಮತ ಬೇಕು ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ ಎಂದು ಕಾಂಗ್ರೆಸ್ ನಾಯಕ ಆರೀಫ್ ನಸೀಮ್ ಖಾನ್ ಆರೋಪಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯಿಂದ ಕೆಳಗಿದ ನಂತರ ಮುಹಮ್ಮದ್ ಆರಿಫ್ ನಸೀಮ್ ಖಾ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ 48 ಲೋಕಸಭಾ ಕ್ಷೇತ್ರಗಳ ಪೈಕಿ ಎಲ್ಲೂ ಮುಸ್ಲಿಮರಿಗೆ ಟಿಕೆಟ್ ನೀಡದ ಪಕ್ಷದ ನಿರ್ಧಾರವನ್ನು ಖಂಡಿಸಿ ಹಿರಿಯ ಮುಖಂಡ ಆರೀಫ್ ನಸೀಮ್ ಖಾನ್ ಪಕ್ಷದ ಮೂರು ಸಮಿತಿಗಳಿಗೆ ರಾಜೀನಾಮೆ ನೀಡಿದ್ದಾರೆ.

“ಗುಜರಾತ್, ಗೋವಾ, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಹೀಗೆ ಯಾವುದೇ ರಾಜ್ಯದಲ್ಲಿ ಚುನಾವಣೆಯ ಜವಾಬ್ದಾರಿ ನೀಡಿದಾಗ ನಾನು ಪ್ರಾಮಾಣಿಕವಾಗಿ, ದಕ್ಷವಾಗಿ ಕೆಲಸ ಮಾಡಿದ್ದೆ. ಈ ಎಲ್ಲ ಕಾರಣದಿಂದಾಗಿ ನನಗೆ ಮುಸ್ಲಿಮರನ್ನು ಮತ್ತು ಮುಸ್ಲಿಂ ಸಂಘಟನೆಗಳನ್ನು ಎದುರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

Join Whatsapp