Home ಟಾಪ್ ಸುದ್ದಿಗಳು ಗ್ಯಾರೆಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.


ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

Join Whatsapp
Exit mobile version