ರಾಹುಲ್ ಪಾದಯಾತ್ರೆ ವ್ಯಾಪ್ತಿಗೆ ಒಳಪಡದ ರಾಜ್ಯಗಳಲ್ಲಿ ಕಾಂಗ್ರೆಸ್ ಯಾತ್ರೆ ನಡೆಸಲಿದೆ: ಜೈರಾಮ್ ರಮೇಶ್

Prasthutha|

ಹೈದರಾಬಾದ್ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಸಂಚರಿಸಲು ಸಾಧ್ಯವಾಗದ ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -

ಮಂಗಳವಾರ ಹೈದರಾಬಾದ್ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್, ಯಾತ್ರೆಗಾಗಿ ಗೊತ್ತುಪಡಿಸಿದ ಮಾರ್ಗ ಹೊರತುಪಡಿಸಿ, ಇತರ ರಾಜ್ಯಗಳಿಗೆ ಯಾತ್ರೆ ತೆರಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಿ ಜನರನ್ನು ಸಂಘಟಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಯಾತ್ರೆಯ ಆಶಯವನ್ನು ಎಲ್ಲ ರಾಜ್ಯಗಳ ಜನರಿಗೂ ತಲುಪಿಸುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದರು.

ಯಾತ್ರೆ ಈಗಾಗಲೇ 55 ದಿನ ಪೂರೈಸಿದ್ದು, ಹೈದರಾಬಾದ್ ಮೂಲಕ ಯಾತ್ರೆ ಸಾಗಿದೆ.

- Advertisement -

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 12 ರಾಜ್ಯಗಳ ಮೂಲಕ ಭಾರತ್ ಜೋಡೊ ಯಾತ್ರೆ ಸಾಗುತ್ತಿದೆ.

Join Whatsapp