Home ರಾಜ್ಯ ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್’​ಗೆ ಜಯ ಸಿಗಲಿದೆ: ಮಲ್ಲಿಕಾರ್ಜುನ ಖರ್ಗೆ

ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್’​ಗೆ ಜಯ ಸಿಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿ ನಮಗೆ ಜಯ ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಚೆನ್ನಾಗಿ ಆಗಿದೆ. ನಮಗೆ ಬಂದಿರುವ ಫೀಡ್ ಬ್ಯಾಕ್ ಚೆನ್ನಾಗಿದೆ. ನಾಲ್ಕು ರಾಜ್ಯಗಳಲ್ಲಿ ನಮಗೆ ಜಯ ಸಿಗುತ್ತೆ. ಮಿಜೋರಾಂನಲ್ಲಿ ಅತಂತ್ರ ಆಗಬಹುದು ಎಂದರು. ನಾವು ಊಹಿಸಿದಂತೆ ಫಲಿತಾಂಶ ಬರಲಿದೆ. ನಮಗೆ ಬಹುಮತ ಬರಲಿದೆ. ಆಯಾ ರಾಜ್ಯಗಳ ನಾಯಕರ ಜೊತೆ ಮಾತಾಡಿದ್ದೇನೆ. ಕಮಲ್ ನಾಥ್ ಜೊತೆಗೂ ಸಂಪರ್ಕದಲ್ಲಿದ್ದೇನೆ. ವಿಪಕ್ಷ ನಾಯಕರ ಜೊತೆ ಮಾತನಾಡಿದ್ದೇನೆ ಎಂದರು.

Join Whatsapp
Exit mobile version