ಹರಿಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್’ಗೆ ಗೆಲುವು: ಮಲ್ಲಿಕಾರ್ಜುನ ಖರ್ಗೆ

Prasthutha|

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಬಹುಮತ ಪಡೆದು ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಜಯ ಸಾಧಿಸಲಿದ್ದೇವೆ. ಹರಿಯಾಣವಂತೂ ಗೆಲ್ಲಲಿದ್ದೇವೆ. ಜಮ್ಮು-ಕಾಶ್ಮೀರದಲ್ಲೂ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.


‘ಬಿಜೆಪಿ ಬಳಿ ದುಡ್ಡು ಇದೆ, ಅವರ ನೀತಿ ವಿಭಿನ್ನ ಅಂತ ಹೇಳುತ್ತಾರೆ. ಆದರೆ ಈಗ ಫಲಿತಾಂಶ ನಿಮ್ಮ ಮುಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲರ ಬೆಂಬಲವಿದೆ. ಕಾಂಗ್ರೆಸ್ ಪರ ಎಲ್ಲರ ಗಮನವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವೇ ಗೆಲುವು ಗಳಿಸಲಿದೆ’ ಎಂದು ಅವರು ಹೇಳಿದ್ದಾರೆ.



Join Whatsapp