ಕಾಂಗ್ರೆಸ್​ ಕಾರ್ಯಕರ್ತರಿಂದ ಮುಡಾ ಅಧ್ಯಕ್ಷನಿಗೆ ಘೇರಾವ್​

Prasthutha|

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ. 27) ಮೈಸೂರಿಗೆ ತೆರಳಿದ್ದಾರೆ.

- Advertisement -

ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಬಂದಿದ್ದ, ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರನ್ನು ಕಾಂಗ್ರೆಸ್​ ಕಾರ್ಯಕರ್ತರೇ ಘೇರಾವ್​ ಹಾಕಿದ್ದಾರೆ.

ಸಿಎಂ ಆಪ್ತ, ಮುಡಾ ಅಧ್ಯಕ್ಷ ಮರಿಗೌಡ ಅವರಿಗೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿ, ಸಿದ್ದರಾಮಯ್ಯರ ಈ ಸ್ಥಿತಿಗೆ ನೀನೇ ಕಾರಣ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಪಸ್​​ ಕಳುಹಿಸಿದರು. ಈ ವೇಳೆ ಕೆ.ಮರಿಗೌಡ ತಿಳಿ ಹೇಳಲು ಮುಂದಾದರು. ಆದರೆ ಕಾರ್ಯಕರ್ತರು, ನಿನ್ನ ಭಾಷಣ ಬೇಡ ಹೊರಡು ಅಂತ ಕೆ. ಮರಿಗೌಡ ಅವರನ್ನು ಬಲವಂತವಾಗಿ ಕಾರು ಹತ್ತಿಸಿ ವಾಪಸ್​ ಕಳುಹಿಸಿದರು.



Join Whatsapp