RSS ಕಚೇರಿಗೆ ರಾಷ್ಟ್ರಧ್ವಜ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು; ವಾಗ್ವಾದದ ಬಳಿಕ ಧ್ವಜ ಸ್ವೀಕರಿಸಿದ ಮುಖಂಡರು

Prasthutha|

ಹುಬ್ಬಳ್ಳಿ: ಆರ್ ಎಸ್ ಎಸ್ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸಲಾಗುವುದಿಲ್ಲ ಎಂಬ ಆರೋಪಗಳ ಮಧ್ಯೆಯೇ ಕಾಂಗ್ರೆಸ್ ಕಾರ್ಯಕರ್ತರು ಆರ್ ಎಸ್ ಎಸ್ ಕಚೇರಿಗೆ ತೆರಳಿ ರಾಷ್ಟ್ರಧ್ವಜ ಕೊಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -

ಆದರೆ ಧ್ವಜ ಸ್ವೀಕರಿಸಲು ನಿರಾಕರಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಆರ್ ಎಸ್ ಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಮುಜುಗರಕ್ಕೊಳಗಾದ ಆರ್ ಎಸ್ ಎಸ್ ಕಾರ್ಯಕರ್ತರು ಅನಿವಾರ್ಯವಾಗಿ ಧ್ವಜವನ್ನು ಸ್ವೀಕರಿಸಿದರು.

ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆರ್ ಎಸ್ ಎಸ್ ಕೇಶವ ಕುಂಜ ಕಚೇರಿಯಲ್ಲಿ ಆರ್ ಎಸ್ ಎಸ್  ಪ್ರಮುಖರಿಗೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್  ಉಳ್ಳಾಗಡ್ಡಿ ಮಠ ಅವರ ನೇತೃತ್ವದಲ್ಲಿ ಖಾದಿಯಿಂದ ತಯಾರಿಸಿದ ತ್ರಿವರ್ಣ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು.

- Advertisement -

 ಕೇಂದ್ರ ಸರ್ಕಾರದ ಆದೇಶದಂತೆ ಕಳೆದ ಏಳು ದಿನಗಳಿಂದ ಎಲ್ಲಾ ಭಾರತೀಯರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತ್ರಿವರ್ಣ ಧ್ವಜದ ಭಾವಚಿತ್ರವನ್ನು  ಪ್ರೊಫೈಲ್ ಪಿಚ್ಚರ್  ಆಗಿ ಪ್ರದರ್ಶಿಸಿದ್ದಾರೆ.  ಆದರೆ ಇದುವರೆಗೂ ಆರ್ ಎಸ್ ಎಸ್ ನವರು ತಮ್ಮ ಫೇಸ್ ಬುಕ್, ಇನ್ಸ್ ಸ್ಟಾಗ್ರಾಂ ಟ್ವಿಟರ್ ಖಾತೆಗಳಲ್ಲಿ ಭಗವಧ್ವಜವೇ ಇಟ್ಟುಕೊಂಡಿದ್ದಾರೆ. ಈಶ್ವರಪ್ಪನವರು ದೇಶದ ತ್ರಿವರ್ಣವನ್ನು ಬದಲಾಯಿಸಿ ಭಗವದ್ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಹೇಳಿದ್ದರು. ಸಾವರ್ಕರ್, ಗೋಳ್ವಾಲ್ಕರ್ ಯಾವಾಗಲೂ ತ್ರಿವರ್ಣ ಧ್ವಜದ ವಿರುದ್ಧ ಮಾತನಾಡುತ್ತಿದ್ದರು. ಅದೇ ರೀತಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 52 ವರ್ಷಗಳ ಕಾಲ ಆರ್ ಎಸ್ ಎಸ್ ತ್ರಿವರ್ಣ ರಾಷ್ಟ್ರ ಧ್ವಜಾರೋಹಣ  ಮಾಡಿರಲಿಲ್ಲ ಎಂದು ವಿದ್ಯಾನಗರ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿ ಮಠ  ಆರೋಪಿಸಿದರು.

ಪ್ರಾರಂಭದಲ್ಲಿ ನಮಗೆ ಬೇಡ ನಮ್ಮ ಬಳಿ ರಾಷ್ಟ್ರಧ್ವಜ ಇದೆ ಎಂದು ಸಂಘದ ಪ್ರಮುಖರು ಕಲೆ ಬಿದ್ದಿರುವ ರಾಷ್ಟ್ರ ಧ್ವಜವನ್ನು ತಂದು ಕಾಂಗ್ರೆಸ್ಸಿಗರಿಗೆ ತೋರಿಸಿದರು. ಇದಕ್ಕೆ ತಕರಾರು ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಲೆ ಇದ್ದಂತಹ ಧ್ವಜವನ್ನು ಧ್ವಜಾರೋಹಣ ಮಾಡಬಾರದು ಎಂದು ತಿಳಿ ಹೇಳಿದರು. ಆಗ ಆರ್ ಎಸ್ ಎಸ್ ನವರು ನಾವು ಈ ಧ್ವಜವನ್ನು ತೊಳೆದು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದರು. ಆಗ ಮತ್ತೆ ತಿಳಿಸಿದ ಕಾಂಗ್ರೆಸ್ ನವರು, ಧ್ವಜದ ಮೇಲೆ ಕಲೆ ಬಿದ್ದರೆ ಸದರಿ ಧ್ವಜವನ್ನು ತೊಳೆಯಬಾರದು  ಎಂದು ಧ್ವಜ ಸಂಹಿತೆ ಹೇಳುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಲ ಕಾಲದ ವಾಗ್ವಾದದ ನಂತರ ಅಮರನಾಥ್ ಅವರು ತ್ರಿವರ್ಣ ರಾಷ್ಟ್ರಧ್ವಜವನ್ನು  ಸ್ವೀಕರಿಸಿದರು

ಹೂವಪ್ಪ ದಾಯಗೋಡಿ, ಬಸವರಾಜ ಮಲಕಾರಿ, ಮುಹಮ್ಮದ್ ಶರೀಫ್ ಗರಗದ, ವಿರೇಶ್ ಜಂಜುನವರ, ಕಿರಣ ಹಿರೇಮಠ, ಶಿವುಕುಮಾರ ಹಿರೇಮಠ,ಬಸವರಾಜ ಮ್ಯಾಗೇಡಿ,  ಮಲ್ಲಣ್ಣ ಮುತ್ತಗಿ, ಸಂತೋಷ್ ಮುದ್ದಿ,  ಬಾಳಮ್ಮ ಜಂಗಿನವರ, ಪುಷ್ಪಾ ಪಾಟೀಲ, ಸಂತೋಷ ನಾಯಕ, ವಿಶಾಲ  ಸಿಂಹಾಸನ, ನಾಗರಾಜ ಓಬ್ಬoಳಮಪಲ್ಲೆ, ಸುನಿಲ ಮರಾಠೆ ಮತ್ತಿತರರು ಇದ್ದರು.

Join Whatsapp