Home ಟಾಪ್ ಸುದ್ದಿಗಳು ಉತ್ತರ ಪ್ರದೇಶ | ಅಕ್ರಮ ಮದ್ಯ ಜಪ್ತಿಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ; ಓರ್ವ ಕಾನ್ಸ್...

ಉತ್ತರ ಪ್ರದೇಶ | ಅಕ್ರಮ ಮದ್ಯ ಜಪ್ತಿಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ; ಓರ್ವ ಕಾನ್ಸ್ ಟೇಬಲ್ ರನ್ನೇ ಹೊಡೆದು ಕೊಂದ ಗೂಂಡಾಗಳು

ಲಖನೌ : ಅಕ್ರಮ ಮದ್ಯ ಜಪ್ತಿಗೆ ತೆರಳಿದ ಪೊಲೀಸರ ಮೇಲೆ ಗೂಂಡಾಗಳು ಹಲ್ಲೆ ಮಾಡಿ, ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾಸಗಂಜ್ ನಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿದ್ದು, ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ.

ಮೃತಪಟ್ಟಿರುವ ಕಾನ್ಸ್ ಟೇಬಲ್ ದೇವೇಂದ್ರ ಮತ್ತು ಗಾಯಗೊಂಡಿರುವ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.

ನಕಲಿ ಮದ್ಯ ಮಾರಾಟ ಜಾಲವನ್ನು ಬೇಧಿಸಲು ತೆರಳಿದ ಸಂದರ್ಭದಲ್ಲಿ ಗೂಂಡಾಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ರವಾನಿಸಿದ್ದಾರೆ.

ಸಿಧಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗ್ಲಾ ಧೀಮರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಕಾನ್ಸ್ ಟೇಬಲ್ ದೇವೇಂದ್ರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡುವ ಭರವಸೆ ಸರಕಾರ ನೀಡಿದೆ.  

Join Whatsapp
Exit mobile version