ಕಾನ್ ಸ್ಟೆಬಲ್ ನೇಮಕಾತಿ: ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಮೂವರು ಮೃತ್ಯು

Prasthutha|

ರಾಂಚಿ: ಜಾರ್ಖಂಡ್ ನಲ್ಲಿ ಅಬಕಾರಿ ಇಲಾಖೆಯ ಕಾನ್ ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ 25 ಅಭ್ಯರ್ಥಿಗಳ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಮೃತರನ್ನು ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಎಂದು ಗುರುತಿಸಲಾಗಿದೆ.


ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಅಭ್ಯರ್ಥಿಗಳು ಮೃತಪಟ್ಟಿದ್ದರೆ, ಮತ್ತೊಬ್ಬ ಅಭ್ಯರ್ಥಿ ರಾಂಚಿಯ ‘ರಿಮ್ಸ್’ನಲ್ಲಿ ಸಾವಿಗೀಡಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ.



Join Whatsapp