ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ: ಸಂತೋಷ್ ಲಾಡ್

Prasthutha|

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹೊತ್ತಿನಲ್ಲೇ ರಾಮಮಂದಿರ ವಿಚಾರವನ್ನು ಇಟ್ಟುಕೊಂಡು ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ನಿರ್ಮಾಣ ಮಾಡಲಾಗಿಲ್ಲ. ಕೇವಲ ರಾಮ, ರಹಿಮ, ಅಪ್ಘಾನಿಸ್ತಾನ, ಪಾಕಿಸ್ತಾನ ಹೆಸರು ಮುಂದೆ ಇಟ್ಟುಕೊಂಡು ಮತ ಕೇಳುವುದಷ್ಟೇ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Join Whatsapp