ಮುಂದುವರಿದ ಭಾರತೀಯರ ಸ್ಥಳಾಂತರ ಕಾರ್ಯ; ಉಕ್ರೇನ್ ನ ನೆರೆ ರಾಷ್ಟ್ರಗಳಿಗೆ ತೆರಳಲಿರುವ ಕೇಂದ್ರ ಸಚಿವರು

Prasthutha|

ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್ನಿಂದ ಭಾರತೀಯರನ್ನು ಸುಗಮವಾಗಿ ತಾಯ್ನಾಡಿಗೆ ಕರೆತರುವ ಉದ್ದೇಶದಿಂದ ಕೇಂದ್ರದ ಕೆಲವು ಸಚಿವರನ್ನು ಉಕ್ರೇನ್ ನ ನೆರೆ ರಾಷ್ಟ್ರಗಳಿಗೆ ಕಳುಹಿಸಲಾಗಿದೆ.

- Advertisement -

ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿ ಪ್ರಧಾನಿ ಮೋದಿ ಉನ್ನತಮಟ್ಟದ ಸಭೆ ಕರೆದಿದ್ದು. ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗಲು ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಮುಂತಾದವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನ ನೆರೆ ದೇಶಗಳಿಗೆ ತೆರಳಲಿದ್ದಾರೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾ ಮೂಲಕ ಸ್ವದೇಶಕ್ಕೆ ಕರೆಸಿಕೊಳ್ಳಲಾಗುತ್ತಿದ್ದು ‘ಆಪರೇಷನ್ ಗಂಗಾ’ ಎಂಬ ಹೆಸರಿನ ಕಾರ್ಯಾಚರಣೆ ಮೂಲಕ ಸ್ಥಳಾಂತರ ನಡೆಯುತ್ತಿದೆ. ಈ ದೇಶಗಳ ಗಡಿಗಳಲ್ಲಿ ಉಕ್ರೇನ್ನಿಂದ ಬರುವ ಭಾರತೀಯರಿಗೆ ನೆರವಾಗಲೆಂದೇ ತೆರೆಯಲ್ಪಟ್ಟ ಕೇಂದ್ರಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

Join Whatsapp