ಕೆಲಸದಿಂದ ವಜಾ: ಗ್ರಾಪಂ ಕಚೇರಿ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ನೌಕರ

Prasthutha|

ಬೆಂಗಳೂರು: ಕಸ ಗುಡಿಸುವ (ಸ್ವೀಪರ್) ಕೆಲಸದಿಂದ ವಜಾಗೊಳಿಸಿದ್ದರಿಂದ ನೊಂದ ಗುತ್ತಿಗೆ ನೌಕರರೊಬ್ಬರು ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾದನಾಯಕನಹಳ್ಳಿ ಬಳಿ ನಡೆದಿದೆ.

- Advertisement -

ಹೆಗ್ಗಡದೇವಪುರದ ಹನುಮಯ್ಯ(50) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ನಾಲ್ಕು ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇದರಿಂದ ನೊಂದ ಹನುಮಯ್ಯ ಆಲೂರು ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp