ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನಿಗೆ ಎರಡು ಲಕ್ಷ ರೂ. ಪರಿಹಾರ ವಿತರಣೆ

Prasthutha|

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು.

- Advertisement -

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಎಂಎಲ್ ಸಿ ಐವಾನ್ ಡಿಸೋಜಾ ಮನವಿ ಮಾಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗಿದೆ. ಪರಿಹಾರದ ಚೆಕ್ ಅನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಸಂತೋಷ್ ವಿತರಣೆ ಮಾಡಿದರು.



Join Whatsapp