ನಿಗಮ, ಮಂಡಳಿ ನೇಮಕ: ನಾವೇನು ಹೈ ಕಮಾಂಡ್ ಗುಲಾಮರಾ?: ರಾಜಣ್ಣ ಕಿಡಿ

Prasthutha|

ತುಮಕೂರು: ಕೊನೆಗೂ ಸರಕಾರ ನಿಗಮ, ಮಂಡಳಿಗಳಿಗೆ ನೇಮಕ‌ಮ ಮಾಡಲಾಗಿದ್ದು, ಈ ಸಂದರ್ಭ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಚಿವ ರಾಜಣ್ಣ ಕಿಡಿಗಾರಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಹೈ ಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ನಮ್ಮ ಜತೆ ಮಾತುಕತೆ ನಡೆಸಿ, ವಿಶ್ವಾಸಕ್ಕೆ ತೆಗೆದುಕೊಂಡು ನಿಗಮ, ಮಂಡಳಿಗೆ ನೇಮಕ ಮಾಡಬೇಕಾಗಿತ್ತು. ದೆಹಲಿಯಲ್ಲಿ ಕುಳಿತು ಪಟ್ಟಿ ಮಾಡಿ ಲಾಟರಿ ಟಿಕೆಟ್ ಹಂಚಿದಂತೆ ಹಂಚಿದರೆ ಹೇಗೆ? ನಮ್ಮನ್ನು ಒಂದು ಮಾತು ಕೇಳಬೇಕಲ್ಲ? ಎಂದು ಹೈಕಮಾಂಡನ್ನು ತರಾಟೆಗೆ ತೆಗೆದುಕೊಂಡರು.

- Advertisement -

ಸ್ಥಳೀಯವಾಗಿ ಯಾವ ಕಾರ್ಯಕರ್ತರು, ಮುಖಂಡರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿರುತ್ತದೆ. ನಾವು ಕೊಟ್ಟ ಹೆಸರುಗಳನ್ನು ಸೇರಿಸಬೇಕು. ಅದು ಬಿಟ್ಟು, ದೆಹಲಿಯಲ್ಲಿ ಕುಳಿತು ತಮಗೆ ಬೇಕಾದವರ ಹೆಸರುಗಳನ್ನು ಸೇರಿಸುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಹಿಂದೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟು, ಸಲಹೆ ನೀಡುತ್ತಿದ್ದರು. ಈಗ ಅವರೇ ಪಟ್ಟಿ ಸಿದ್ಧಪಡಿಸಿ ಕಳುಹಿಸಿದ್ದಾರೆ. ಇದು ಹೊಸ ಹೈಕಮಾಂಡ್‌ನ, ಹೊಸ ವರಸೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರು ಹೇಳದೆ ಗುಡುಗಿದ್ದಾರೆ.

Join Whatsapp
Exit mobile version