Home ಟಾಪ್ ಸುದ್ದಿಗಳು ಜೂನ್ 4ರ ಬಳಿಕ ಭ್ರಷ್ಟರು ಜೈಲಿನಲ್ಲೇ ಜೀವನ ಕಳೆಯಬೇಕಾಗುತ್ತದೆ, ಇದು ಮೋದಿ ಗ್ಯಾರಂಟಿ: ಮೋದಿ

ಜೂನ್ 4ರ ಬಳಿಕ ಭ್ರಷ್ಟರು ಜೈಲಿನಲ್ಲೇ ಜೀವನ ಕಳೆಯಬೇಕಾಗುತ್ತದೆ, ಇದು ಮೋದಿ ಗ್ಯಾರಂಟಿ: ಮೋದಿ

ಕೋಲ್ಕತ್ತಾ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಭ್ರಷ್ಟರ ವಿರುದ್ಧದ ಕ್ರಮ ತೀವ್ರಗೊಳ್ಳುತ್ತದೆ. ಜೂನ್ 4ರ ಬಳಿಕ ಭ್ರಷ್ಟರು ಜೈಲಿನಲ್ಲೇ ಜೀವನ ಕಳೆಯಬೇಕಾಗುತ್ತದೆ, ಭ್ರಷ್ಟರನ್ನು ಬಿಡುವುದೇ ಇಲ್ಲ, ಇದು ಮೋದಿ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಭಾನುವಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದಂತೆ ಐಎನ್​ಡಿಐಎ ಮೈತ್ರಿಕೂಟವನ್ನು ಗುರಿಯಾಗಿಸಿ ಪ್ರಧಾನಿ ಕಿಡಿಗಾರಿದರು. ಮತಬ್ಯಾಂಕ್ ಓಲೈಕೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲ್ಲ ಮಿತಿಗಳನ್ನೂ ಮೀರಿದ್ದಾರೆ. ಭ್ರಷ್ಟಾಚಾರದ ವಿಷಯದಲ್ಲಿ ಟಿಎಂಸಿ-ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ಇಸ್ಕಾನ್, ರಾಮಕೃಷ್ಣ ಮಿಷನ್ ಹಾಗೂ ಭಾರತ ಸೇವಾಶ್ರಮ ಸಂಘಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಸಕ್ತಿಗಳಿಗೆ ಪರವಾಗಿ ಕೆಲಸ ಮಾಡುತ್ತಿವೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೂಗ್ಲಿಯ ಜೈರಂಬಾಟಿಯಲ್ಲಿ ಶನಿವಾರ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ವಾಗ್ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿನ ವೋಟ್​ಬ್ಯಾಂಕ್ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಈ ತರದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

Join Whatsapp
Exit mobile version