ದ.ಕ ಜಿಲ್ಲೆಯಲ್ಲಿ ಮತ ಎಣಿಕೆ ಆರಂಭ

Prasthutha|

ಮಂಗಳೂರು: ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ .10 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಆರಂಭಗೊಂಡಿದೆ.

- Advertisement -

ಮಂಗಳೂರಿನ ರೊಸಾರಿಯೋ ಶಾಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ.

ಬಿಜೆಪಿಯಿಂದ ಕೋಟಿ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ ನಿಂದ ಮಂಜುನಾಥ ಭಂಡಾರಿ, ಎಸ್‌ಡಿಪಿಐನಿಂದ ಶಾಫಿ ಬೆಳ್ಳಾರೆ ಸ್ಪರ್ಧಿಸಿದ್ದು , ಇಂದು ಮಧ್ಯಾಹ್ನ ಒಳಗೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇವೆ ಎನ್ನಲಾಗಿದೆ.

Join Whatsapp