ಬೆಲೆ ಏರಿಕೆ ಸೇರಿ ವಿವಿಧ ಸಮಸ್ಯೆಗಳ ವಿರುದ್ಧ ದೇಶಾದ್ಯಂತ ಚಳವಳಿ: ಕಾಂಗ್ರೆಸ್ ನಿಂದ ಸಮಿತಿ ರಚನೆ

Prasthutha|

ನವದೆಹಲಿ: ಎಲ್ ಪಿಜಿ , ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಅಗತ್ಯ ವಸ್ತುಗಳು ನಿರಂತರ ಬೆಲೆ ಏರಿಕೆ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ದೇಶದೆಲ್ಲೆಡೆ ಚಳುವಳಿಗಳನ್ನು ಹಮ್ಮಿಕೊಂಡಿದೆ.

- Advertisement -


ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಷ್ಟ್ರೀಯ ಸಮಸ್ಯೆಗಳ ಕುರಿತು ಜನ ಜಾಗೃತಿ ಮೂಡಿಸಲು ಮುಂದಾಗಿದ್ದು, ಇದಕ್ಕಾಗಿ ದೇಶಾದ್ಯಂತ ಚಳವಳಿ ನಡೆಸಲು ಸೂಚಿಸಿದ್ದಾರೆ. ಚಳುವಳಿಯ ರೂಪುರೇಷೆ ತಯಾರಿಸಲು ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಂಬತ್ತು ಮಂದಿ ಸದಸ್ಯರು ಈ ಸಮಿತಿಯಲ್ಲಿದ್ದಾರೆ.


ದಿಗ್ವಿಜಯ್ ಸಿಂಗ್ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಹೊರತುಪಡಿಸಿ, ಉತ್ತಮ್ ಕುಮಾರ್ ರೆಡ್ಡಿ, ಮನೀಶ್ ಚತ್ರತ್, ಬಿ.ಕೆ ಹರಿಪ್ರಸಾದ್, ರಿಪುನ್ ಬೋರಾ, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಈ ಕಾರ್ಯತಂತ್ರ ರೂಪಿಸಿದೆ.

Join Whatsapp