ಮಂಗಳೂರು: ದಂಪತಿ ಆತ್ಮಹತ್ಯೆಗೆ ಶರಣು; ಘಟನೆ ಬೆನ್ನಲ್ಲೇ ಬಡ್ಡಿ ಮಾಫಿಯಾ ವಿರುದ್ಧ ಕಮೀಷನರ್ ಖಡಕ್ ವಾರ್ನಿಂಗ್

Prasthutha|

ಮಂಗಳೂರು: ನಗರದ ಕದ್ರಿ ಪಿಂಟೋ ಲೇನ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುರೇಶ್ (62), ವಾಣಿ (55) ಎಂದು ಗುರುತಿಸಲಾಗಿದೆ.

- Advertisement -

ಸುರೇಶ್ ಮನೆ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಣಕಾಸಿನ ವ್ಯವಹಾರದಲ್ಲಾದ ನಷ್ಟವೇ ದಂಪತಿ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡ್ಡಿ ಮಾಫಿಯಾ ವಿರುದ್ಧ ಕಮೀಷನರ್ ಖಡಕ್ ವಾರ್ನಿಂಗ್:

- Advertisement -

ಘಟನಾ ಸ್ಥಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪೊಲಿಸ್ ಕಮೀಷನರ್ ಶಶಿಕುಮಾರ್, ಹಣಕಾಸಿನಲ್ಲಿ ಉಂಟಾದ ಸಮಸ್ಯೆಯಿಂದಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವುದು ದುರಾದೃಷ್ಟಕರ. ಲಾಕ್ ಡೌನ್ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಹಲವೆಡೆ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡ್ತಿರೋದು ಗಮನಕ್ಕೆ ಬಂದಿದೆ. ಇಂಥವರ ವಿರುದ್ದ ಎಕ್ಸೋರ್ಬಿಟಂಟ್ ರೇಟ್ ಅಫ್ ಇಂಟ್ರೆಸ್ಟ್ ಆಕ್ಟ್ ನಡಿ‌ ಪ್ರಕರಣ ದಾಖಲಿಸಲು ಅವಕಾಶ ಇದೆ. ಅತಿಯಾದ ಬಡ್ಡಿ ವಸೂಲಿಗೆ ಒತ್ತಡ, ಬೆದರಿಕೆ ಹಾಕಿದಲ್ಲಿ ಸ್ಥಳೀಯ ಠಾಣೆಗೆ ದೂರು ನೀಡಿ, ಚೀಟಿ ವ್ಯವಹಾರ ಮಾಡೋರು ಆತ್ಮಹತ್ಯೆ ಮಾಡೋದು, ಊರು ಬಿಟ್ಟು ಹೋಗೋದು ಮಾಡುತ್ತಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಬಡ್ಡಿ ವಸೂಲಿ ಕಂಡು ಬಂದರೆ ಸೂಕ್ತ ಕಾನೂನು ‌ಕ್ರಮಕ್ಕೆ ನಮ್ಮ ಎಲ್ಲಾ ಅಧಿಕಾರಿಗಳಿಗೆ ಸೂಚನೆ ಕೊಡುವುದಾಗಿ ತಿಳಿಸಿದ್ದಾರೆ.

Join Whatsapp