ಬೆಳಗಾವಿ ಬಳಿ ಜೋಡಿ ಕೊಲೆ: ಆರು ಮಂದಿ ಬಂಧನ

Prasthutha|

ಬೆಳಗಾವಿ: ನಗರದ ಸುಳೇಭಾವಿ ಗ್ರಾಮದಲ್ಲಿ ನಡೆದ ಎರಡು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ.

- Advertisement -

ಕಳೆದ ಅ.6ರ ತಡರಾತ್ರಿ 6 ರಿಂದ 7 ಜನರ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಕಾಶ ಪಾಟೀಲ ಹಾಗೂ ಮಹೇಶ ಮುರಾರಿ ಎಂಬುವರನ್ನು ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದರು.

ಬಂಧಿತರು ಕೊಲೆ ನಡೆದ ಗ್ರಾಮದವರೇ ಆಗಿದ್ದು, ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಅಷ್ಟೇ ಅಲ್ಲದೇ ಕೆಲವರು ದೂರದ ಸಂಬಂಧಿಗಳು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದರು.
ವೈಯಕ್ತಿಕ ದ್ವೇಷಗಳಿಂದ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಎರಡು ಮೂರು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ವಶಕ್ಕೆ ಪಡೆದ ಆರೋಪಿಗಳು 20 ರಿಂದ 25 ವರ್ಷದ ವಯಸ್ಸಿನವರಾಗಿದ್ದಾರೆ. ಎಲ್ಲರೂ ಎರಡು ಮೂರು ವರ್ಷಗಳಿಂದ ಜತೆಯಲ್ಲಿ ಓಡಾಡಿಕೊಂಡಿದ್ದ ಅವರು, ಸಣ್ಣಪುಟ್ಟಕೆಲಸ ಮಾಡುತ್ತಿದ್ದರು, ಕೆಲವರು ಬೆಳಗಾವಿಯಲ್ಲಿ ರೂಮ್ ಮಾಡಿ ವಾಸವಿದ್ದರು ಎಂದರು.

- Advertisement -

ಕೊಲೆಯಾದ ಮಹೇಶ ಮುರಾರಿ 2019ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಕೊಲೆಗೂ ಮುನ್ನ ಕಾರದ ಪುಡಿ ಎರಚಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಘಟನಾ ಸ್ಥಳಕ್ಕೆ ನಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳಗಾವಿ ಗ್ರಾಮೀಣ ಎಸಿಪಿ ಗಿರೀಶ್‌, ಮಾರಿಹಾಳ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಹಾಂತೇಶ ಬಸ್ಸಾಪುರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದರು.

ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಯಾದ ಮಹೇಶ ಮುರಾರಿ ಗೋಕಾಕನ ಟೈಗರ ಗ್ಯಾಂಗ್‌ ಜತೆ ಲಿಂಕ್‌ ಇದ್ದ ಬಗ್ಗೆ ತನಿಖೆಯೂ ನಡೆಯುತ್ತಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ ಎಂದು ಸ್ಪಷ್ಟಪಡಿಸಿದರು.

Join Whatsapp