ಮಗನನ್ನು ಹೊರಹಾಕಿ, ತಂದೆಗೆ ಮನೆ ಹಸ್ತಾಂತರಿಸಲು ಕೋರ್ಟ್ ಆದೇಶ !

Prasthutha|

ಚಿಕ್ಕಬಳ್ಳಾಪುರ: ತಾನು ಕಷ್ಟಪಟ್ಟು ದುಡಿದು ಸಂಪಾದಿಸಿ ಖರೀದಿಸಿದ ಮನೆಯಿಂದ ತನ್ನನ್ನೇ ಹೊರಹಾಕಿದ್ದ ಮಗನ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ತಂದೆ, ತನ್ನ ಮನೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಂದೆಯ ಮನವಿಯನ್ನು ಸ್ಬೀಕರಿಸಿರುವ ನ್ಯಾಯಾಲಯ, ಮಗನನ್ನು ಮನೆಯಿಂದ ಹೊರಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಮಗ ಎಂ.ಸುಭಾಷ್ ಮತ್ತು ಸೊಸೆ ಮಂಜುಳಾ ಬಲವಂತಾಗಿ ಮನೆಯಿಂದ ಹೊರಹಾಕಿದ್ದರು. ಅಂಜನಿ ಬಡಾವಣೆಯ ಮನೆಯನ್ನು ಮುನಿಸ್ವಾಮಿ ಸ್ವಯಾರ್ಜಿತವಾಗಿ ಖರೀದಿಸಿದ್ದರು.

ಮಗ ಮನೆಯಿಂದ ಹೊರ ಹಾಕಿದ್ದನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಎಸಿ ಕೋರ್ಟ್ ಮತ್ತು ಹೈಕೋರ್ಟ್​ಗಳಲ್ಲಿ ಮುನಿಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿರುವ ಕೋರ್ಟ್​, ಅಕ್ರಮವಾಗಿ ಮನೆ ಪ್ರವೇಶಿಸಿದ್ದ ಮಗ ಸುಭಾಷ್ ಮತ್ತು ಸೊಸೆ ಮಂಜುಳಾರನ್ನು ಹೊರಹಾಕಿ ಮುನಿಸ್ವಾಮಿ ಪ್ರವೇಶ ಕಲ್ಪಿಸುವಂತೆ ಪೊಲೀಸರಿಗೆ ಆದೇಶ ಹೊರಡಿಸಿದೆ.

- Advertisement -

ಕೋರ್ಟ್​ನ ಆದೇಶದಂತೆ ಮಗ ಮತ್ತು ಸೊಸೆಯನ್ನ ಹೊರಹಾಕಿರುವ ಚಿಂತಾಮಣಿ ಪೊಲೀಸರು ಮುನಿಸ್ವಾಮಿಗೆ ಪ್ರವೇಶ ಕಲ್ಪಿಸಿದ್ದಾರೆ.

ಕೋರ್ಟ್ ಆದೇಶದ ಮನೆಯಿಂದ ಹೊರಹಾಕಲ್ಪಟ್ಟ ಬಳಿಕವೂ ಮಗ ಹಾಗೂ ಸೊಸೆ ಮುನಿಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp