ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಸಭೆ: ವೀಕೆಂಡ್ ಕರ್ಫ್ಯೂ ಭವಿಷ್ಯ ನಿರ್ಧಾರ?

Prasthutha|

ಬೆಂಗಳೂರು: ರಾಜ್ಯದಲ್ಲಿ ವಿಧಿಸಲಾಗಿರುವ ಕೋವಿಡ್ ಕಠಿಣ ನಿಯಮಗಳ ಸಡಿಲಿಕೆ ಕುರಿತು ಸರ್ಕಾರದಿಂದ ಇಂದು ಮಹತ್ವದ ನಿರ್ಧಾರ ಹೊರಬೀಳಲಿದೆ.

- Advertisement -

ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಭವಿಷ್ಯ, ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟ್ ಬಗ್ಗೆ ನಿರ್ಧಾರ ಇಂದು ಅಂತಿಮಗೊಳ್ಳಲಿದ್ದು, ಸಭೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ಕುರಿತು ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ.

Join Whatsapp