ನೈಟ್ ಕರ್ಫ್ಯೂ ಹಿಂಪಡೆದ ಉ.ಪ್ರ ಆದಿತ್ಯನಾಥ್ ಸರ್ಕಾರ

Prasthutha|

ಲಕ್ನೋ: ಕೋವಿಡ್ – 19 ಗಣನೀಯ ಪ್ರಮಾಣದಲ್ಲಿ ಸುಧಾರಣೆಗೊಂಡ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ರ ವರೆಗೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಇಂದಿನಿಂದ ಹಿಂಪಡೆಯಲಾಗಿದೆ ಎಂದು ಉತ್ತರ ಪ್ರದೇಶ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಆದಿತ್ಯನಾಥ್ ಸೂಚನೆಗೆ ಮೇರೆಗೆ ರಾಜ್ಯದಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 6 ರ ವರೆಗೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.

ಈ ಸಂಬಂಧ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಸುತ್ತೋಳೆ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.

- Advertisement -

ಈ ಮಧ್ಯೆ ರಾಜ್ಯದಲ್ಲಿ ಬುಧವಾರ 11 ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 112 ಸಕ್ರಿಯ ಪ್ರಕರಣ ಚಾಲ್ತಿಯಲ್ಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರೊಯೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಸಕ್ತ ಇದುವರೆಗೆ 16,87,048 ರೋಗಿಗಳು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

Join Whatsapp