ಕೋವಿಡ್ ಉಲ್ಬಣ | ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಗಳ ಸೇವೆಗಳನ್ನು ನಿರ್ಬಂಧಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

Prasthutha|

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನ, ಮತ್ತು ಧರ್ಮಸ್ಥಳ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿರ್ಬಂಧಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

- Advertisement -

ದೇವಸ್ಥಾನಗಳನ್ನು ಬೆಳಿಗ್ಗೆ ೭ರಿಂದ ಸಂಜೆ ೭ರವರೆಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ವಾರದ ೫ ದಿನ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದ್ದು, ತೀರ್ಥ ಪ್ರಸಾದ, ಅನ್ನಪ್ರಸಾದ ಸೇವೆಗಳ ಅವಕಾಶಗಳಿಗೂ ನಿರ್ಬಂಧ ಹೇರಲಾಗಿದೆ.

Join Whatsapp