Home ಕರಾವಳಿ ಕೋವಿಡ್ ಉಲ್ಬಣ | ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಗಳ ಸೇವೆಗಳನ್ನು ನಿರ್ಬಂಧಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

ಕೋವಿಡ್ ಉಲ್ಬಣ | ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಗಳ ಸೇವೆಗಳನ್ನು ನಿರ್ಬಂಧಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನ, ಮತ್ತು ಧರ್ಮಸ್ಥಳ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿರ್ಬಂಧಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನಗಳನ್ನು ಬೆಳಿಗ್ಗೆ ೭ರಿಂದ ಸಂಜೆ ೭ರವರೆಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ವಾರದ ೫ ದಿನ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದ್ದು, ತೀರ್ಥ ಪ್ರಸಾದ, ಅನ್ನಪ್ರಸಾದ ಸೇವೆಗಳ ಅವಕಾಶಗಳಿಗೂ ನಿರ್ಬಂಧ ಹೇರಲಾಗಿದೆ.

Join Whatsapp
Exit mobile version