ರೈತರ ಪ್ರತಿಭಟನೆ | ಬಿಜೆಪಿ ನಾಯಕರ ಮನೆ ಮುಂದೆ ದನದ ಸೆಗಣಿ ಸುರಿದ ಪ್ರತಿಭಟನಕಾರರು!

Prasthutha|

ಚಂಡೀಗಢ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ನೀತಿಗಳನ್ನು ವಿರೋಧಿಸಿ ಕಳೆದ 38 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಪಂಜಾಬ್ ನ ಹೋಶಿಯಾರ್ ಪುರದಲ್ಲಿ ಪ್ರತಿಭಟನಕಾರರು ಬಿಜೆಪಿ ನಾಯಕರೊಬ್ಬರ ಮನೆ ಮುಂದೆ ಟ್ರಾಕ್ಟರ್ ಟ್ರಾಲಿ ಒಂದರಲ್ಲಿ ದನದ ಸೆಗಣಿ ತಂದು ಸುರಿದ ಘಟನೆ ನಡೆದಿದೆ.

- Advertisement -

ಬಿಜೆಪಿ ನಾಯಕ, ಮಾಜಿ ಸಚಿವ ತೀಕ್ಷಣ್ ಸೂದ್ ಮನೆ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಅವರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅವರಲ್ಲಿ ಕೆಲವರು ಬಿಜೆಪಿ ನಾಯಕನ ಮನೆ ಮುಂದೆ ಸೆಗಣಿ ತಂದು ಸುರಿದಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಮನೆ ಮುಂದೆ ಸೆಗಣಿ ಸುರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಳಿಕ ಸೂದ್ ಕೂಡ ಧರಣಿ ನಡೆಸಿದ್ದಾರೆ. ಪ್ರತಿಭಟನಕಾರರು ಈ ರೀತಿಯ ವರ್ತನೆ ತೋರದಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.  

Join Whatsapp