Home ಟಾಪ್ ಸುದ್ದಿಗಳು ಗಾಂಜಾ ದಂಧೆಕೋರರನ್ನು ಬಂಧಿಸುವ ವೇಳೆ ಹಲ್ಲೆಗೆ ಒಳಗಾಗಿದ್ದ ಸಿಪಿಐ ಬೆಂಗಳೂರಿಗೆ ಏರ್ ಲಿಫ್ಟ್

ಗಾಂಜಾ ದಂಧೆಕೋರರನ್ನು ಬಂಧಿಸುವ ವೇಳೆ ಹಲ್ಲೆಗೆ ಒಳಗಾಗಿದ್ದ ಸಿಪಿಐ ಬೆಂಗಳೂರಿಗೆ ಏರ್ ಲಿಫ್ಟ್

ಕಲಬುರಗಿ: ಮಹಾರಾಷ್ಟ್ರ ಗಡಿಯಲ್ಲಿ ಗಾಂಜಾ ದಂಧೆಕೋರರನ್ನು ಬಂಧಿಸುವ ವೇಳೆ ಹಲ್ಲೆಗೊಳಗಾಗಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಮಲಾಪುರ ವೃತ್ತದ ಸಿಪಿಐ ಶ್ರೀಮಂತ ಇಲ್ಲಾಳ ಅವರನ್ನು ಸೋಮವಾರ ಬೆಳಿಗ್ಗೆ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ತೀರ್ಮಾನಿಸಲಾಗಿದೆ.


ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈಶಾನ್ಯ ವಲಯದ ಐಜಿಪಿ ಮನೀಷ್ ಖರ್ಬೀಕರ್, ಕಲಬುರಗಿ ಎಸ್ಪಿ ಇಶಾ ಪಂತ್ ಅವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಬಿದ್ದರೆ ಬೆಂಗಳೂರಿಗೆ ಕರೆತರುವಂತೆ ಸೂಚಿಸಿದ್ದರು. ಭಾನುವಾರ ಮಧ್ಯಾಹ್ನವೇ ಏರ್ ಆಂಬುಲೆನ್ಸ್ ಕಲಬುರಗಿ ನಿಲ್ದಾಣ ತಲುಪಿದ್ದು, ಇದೇ ಸೋಮವಾರ ಬೆಳಿಗ್ಗೆ ಜೀರೊ ಟ್ರಾಫಿಕ್ ಮೂಲಕ ನಗರದ ಯುನೈಟೆಡ್ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಶ್ರೀಮಂತ ಇಲ್ಲಾಳ ಅವರನ್ನು ಕರೆದುಕೊಂಡು ಹೋಗಲಾಗುತ್ತದೆ.

Join Whatsapp
Exit mobile version