ಕೇರಳ | ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಘೋಷಣೆ ಕೂಗಿದ ಸಿಪಿಐಎಂ

Prasthutha|

ಕೇರಳ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ವಿಮಾನದಲ್ಲಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಪ್ರವೇಶಿಸಿ ಇರಿದು ಹತ್ಯೆ ನಡೆಸಲಾಗುವುದು ಎಂದು ಸಿಪಿಐಎಂ ಕಾರ್ಯಕರ್ತರು ಪ್ರಚೋದನಕಾರಿ ಘೋಷಣೆ ಕೂಗಿದ್ದರು.

- Advertisement -

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ದಿನಗಳಲ್ಲಿ ಕೇರಳದ ವಿವಿಧೆಡೆ ಕಾಂಗ್ರೆಸ್- ಸಿಪಿಐಎಂ ಮತ್ತು ಮುಸ್ಲಿಮ್ ಲೀಗ್ – ಕಾಂಗ್ರೆಸ್ ನಡುವೆ ಘರ್ಷಣೆ ಏರ್ಪಟ್ಟಿದ್ದು, ಕಾಂಗ್ರೆಸ್ ನ ಹಲವಾರು ಕಾರ್ಯಕರ್ತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಕುರಿತು ವರದಿಯಾಗಿದೆ.

- Advertisement -

ಈ ಮಧ್ಯೆ ಕಾಂಗ್ರೆಸ್ ಕಚೇರಿಯನ್ನು ಗುರಿಯಾಗಿಸಿ ನಾಡಬಾಂಬ್ ಎಸೆತ, ಕಾರ್ಯಕರ್ತರಿಗೆ ವಿನಾಕಾರಣ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಇದು ಹಿಂಸಾತ್ಮಕದ ಕಡೆಗೆ ತಿರುಗಿದ್ದು, ಪೊಲೀಸರು ಸೇರಿದಂತೆ ಹಲವು ಕಾರ್ಯಕರ್ತರಿಗೆ ಗಂಭೀರವಾಗಿ ಗಾಯಗಳಾಗಿದೆ ಎಂದು ತಿಳಿದು ಬಂದಿವೆ.

Join Whatsapp